ADVERTISEMENT

ದುಬೈಗೆ ತೆರಳುತ್ತೇನೆಂದ ಪತ್ನಿ ಕೊಲೆ ಮಾಡಿದ ಪತಿ

​ಪ್ರಜಾವಾಣಿ ವಾರ್ತೆ
Published 29 ಮೇ 2019, 20:40 IST
Last Updated 29 ಮೇ 2019, 20:40 IST

ಕೆಂಭಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಪತಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧವಾರ ಪಟ್ಟಣದಲ್ಲಿ ಸಂಭವಿಸಿದೆ.

ಪಟ್ಟಣದ ಹಿಲ್‍ಟಾಪ್ ಕಾಲೋನಿಯ ನಿವಾಸಿ ಮಹ್ಮದ್ ಜಾಫರ್ (39) ತನ್ನ ಪತ್ನಿ ಹಮೀದಾಬಿ (31) ಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ತನ್ನ ಪತ್ನಿ ಪಾಸ್‍ಪೋರ್ಟ್ ಮಾಡಿಸಿ ದುಬೈಗೆ ಹೋಗುತ್ತೇನೆ ಎಂದು ಹಠ ಹಿಡಿದಿದ್ದ ಕಾರಣ ಬೇಸತ್ತ ಪತಿ ಬುಧವಾರ ಮಧ್ಯಾಹ್ನ ತಲೆಗೆ ಕಟ್ಟಿಗೆಯಿಂದ ಹೊಡೆದು ನಂತರ ಬಾಯಿಯಲ್ಲಿ ಬಟ್ಟೆಯನ್ನು ತುರುಕಿ ಚಾಕುವಿನಿಂದ ಕುತ್ತಿಗೆ ಸೀಳಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಆಗಮಿಸಿದ ಸಿಪಿಐ ಪಂಡಿತ ಸಗರ ಮತ್ತು ಪಿಎಸ್‍ಐ ಬಾಲನಗೌಡ ಪರಿಶೀಲನೆ ನಡೆಸಿದರು. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಿಎಸ್‍ಐ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.