ADVERTISEMENT

ಹೆಚ್ಚಿದ ಒಳ ಹರಿವು: 90 ಸಾವಿರ ಕ್ಯುಸೆಕ್ ನೀರು ನದಿಗೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:08 IST
Last Updated 27 ಜೂನ್ 2025, 16:08 IST
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿಸುತ್ತಿರುವುದು 
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿಸುತ್ತಿರುವುದು    

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಶುಕ್ರವಾರ ಬೆಳಿಗ್ಗೆ 70 ಸಾವಿರ ಕ್ಯುಸೆಕ್ ನೀರು ಹರಿದಿದ್ದು 22 ಗೇಟ್‌ಗಳ ಮೂಲಕ 65,180 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿತ್ತು. ಆದರೆ ಸಂಜೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದ ಮಾಹಿತಿ ಲಭ್ಯವಾಗಿದ್ದರಿಂದಾಗಿ ರಾತ್ರಿ 90 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ಶುಕ್ರವಾರ ರಾತ್ರಿ 79.99 ರಷ್ಟು ನೀರಿನ ಸಂಗ್ರಹವಿದೆ ಎಂದು ಡ್ಯಾಂ ಡಿವಿಜನ್ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.