ADVERTISEMENT

32ನೇ ಜಿಲ್ಲೆಗೆ ಭೇಟಿ ನೀಡಿದ್ದೇನೆ: ಕಟೀಲ್ 

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 7:13 IST
Last Updated 17 ಅಕ್ಟೋಬರ್ 2019, 7:13 IST
   

ಯಾದಗಿರಿ: ಪಕ್ಷ ಸಂಘಟನೆಗೆ ನಗರಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರು ಮಾತಿನ ಭರದಲ್ಲಿ ಈಗಾಗಲೇ 31 ಜಿಲ್ಲೆಗಳಿಗೆ ಭೇಟಿ ನೀಡಿ ಈಗ 32 ನೇ ಜಿಲ್ಲೆಗೆ ಬಂದಿದ್ದೇನೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ರಾಜ್ಯದಲ್ಲಿರುವ ಜಿಲ್ಲೆಗಳ ಬಗ್ಗೆ ಮಾಹಿತಿ ಇಲ್ಲವೆ ಎಂದು ಪ್ರಶ್ನಿಸುವಂತಾಗಿದೆ.

ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷಸ್ಥಾನ ನೀಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಕಾರ್ಯಕರ್ತರ ಭೇಟಿ, ಸಂಘಟನಾ ಪರ್ವ ನಡೆಯುತ್ತಿದೆ. ಅಲ್ಲದೆಮತಗಟ್ಟೆ ಸಮಿತಿ ರಚನೆ ಮಾಡುವುದು ಸೇರಿದಂತೆ ಸದಸ್ಯತ್ವ ಅಭಿಯಾನಕ್ಕೆ ವೇಗ ಕೊಡುವುದಕ್ಕೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನ ಆಚರಣೆ ನಿಮಿತ್ಯ ರಾಷ್ಟ್ರಾದ್ಯಂತ ಪಾದಯಾತ್ರೆ ಕಾರ್ಯ ನಡೆಯುತ್ತಿದೆ. ಅದಕ್ಕೂ ವೇಗ ಕೊಡಲು ಬಂದಿದ್ದೇನೆ.

ADVERTISEMENT

ಈಗಾಗಲೇ ನಾವು 31 ಜಿಲ್ಲೆಗಳನ್ನು ಪ್ರವಾಸ ಮಾಡಿ ಈಗ 32 ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.