ADVERTISEMENT

ಸುರಪುರ: ಅಕ್ರಮ ಮರಳು ವಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 4:39 IST
Last Updated 17 ನವೆಂಬರ್ 2021, 4:39 IST
ಸುರಪುರ ತಾಲ್ಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡರು. ಡಿವೈಎಸ್‍ಪಿ ಡಾ. ದೇವರಾಜ, ಸಿಪಿಐ ಸುನೀಲಕುಮಾರ ಮೂಲಿಮನಿ, ಸಿಬ್ಬಂದಿ ಇದ್ದರು
ಸುರಪುರ ತಾಲ್ಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡರು. ಡಿವೈಎಸ್‍ಪಿ ಡಾ. ದೇವರಾಜ, ಸಿಪಿಐ ಸುನೀಲಕುಮಾರ ಮೂಲಿಮನಿ, ಸಿಬ್ಬಂದಿ ಇದ್ದರು   

ಸುರಪುರ: ತಾಲ್ಲೂಕಿನ ಚೌಡೇಶ್ವರಿಹಾಳ ಮತ್ತು ಹೆಮ್ಮಡಗಿ ಗ್ರಾಮ ಸೇರಿ ಒಟ್ಟು ಮೂರು ಕಡೆ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.

‘3272.50 ಕ್ಯೂಬಿಕ್ ಮೀಟರ್ ಮರಳು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಅಂದಾಜು ₹52 ಲಕ್ಷ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕಿರಣ ತಿಳಿಸಿದ್ದಾರೆ.

‘ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಇನ್‍ಸ್ಪೆಕ್ಟರ್ ಸುನೀಲಕುಮಾರ ಮೂಲಿಮನಿ ತಿಳಿಸಿದ್ದಾರೆ.

ADVERTISEMENT

ಡಿವೈಎಸ್‍ಪಿ ಡಾ.ಬಿ.ದೇವರಾಜ, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಲೋಕೋಪಯೋಗಿ, ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.