ADVERTISEMENT

₹13.28 ಲಕ್ಷ ಮೌಲ್ಯದ ಆಭರಣ ವಶ

ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಚಿನ್ನ, ಬಂಗಾರ ಕಳವು ಮಾಡಿದ್ದ ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 14:48 IST
Last Updated 8 ಫೆಬ್ರುವರಿ 2020, 14:48 IST
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ನಜೀರ್ ಅಹ್ಮದ್ ಸಾಬ ಎಂಬ ಆರೋಪಿಯನ್ನು ಬಂಧಿಸಿ, ಅಪಾರ ಪ್ರಮಾಣ ಬಂಗಾರ, ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ನಜೀರ್ ಅಹ್ಮದ್ ಸಾಬ ಎಂಬ ಆರೋಪಿಯನ್ನು ಬಂಧಿಸಿ, ಅಪಾರ ಪ್ರಮಾಣ ಬಂಗಾರ, ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ   

ಯಾದಗಿರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ನಜೀರ್ ಅಹ್ಮದ್ ಸಾಬಅಹ್ಮದಸಾಬ ಬಡೆಘರ ಎಂಬುವವರನ್ನು ಬಂಧಿಸುವಲ್ಲಿ ಯಾದಗಿರಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಒಟ್ಟು 326 ಗ್ರಾಂ ಬಂಗಾರ ಮತ್ತು 600 ಗ್ರಾಂ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು ₹13.28 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯಾದಗಿರಿ ಗ್ರಾಮೀಣ ಹಾಗೂ ನಗರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು, ವಡಗೇರಾದಲ್ಲಿ 1, ಗುರುಮಠಕಲ್‌ನಲ್ಲಿ 1, ಕೊಡೇಕಲ್ಲ1, ರಾಯಚೂರು ಜಿಲ್ಲೆ 2, ಗದಗ ಜಿಲ್ಲೆ 2 ಪ್ರಕರಣಗಳು ಹೀಗೆ 10 ಪ್ರಕರಣಗಳನ್ನು ದಾಖಲಾಗಿದ್ದವು.

ADVERTISEMENT

ಯಾದಗಿರಿ ವೃತ್ತ ವ್ಯಾಪ್ತಿಯಲ್ಲಿ ದಾಖಲಾದ ಸ್ವತ್ತಿನ ಪ್ರಕರಣಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನಾವಣೆ, ಉಪ ವಿಭಾಗದ ಡಿವೈಎಸ್‌ಪಿ ಶರಣಪ್ಪ ಯು. ಮಾರ್ಗದರ್ಶನದಲ್ಲಿ ಸಿಪಿಐ ಶರಣಗೌಡ ಶರಣಗೌಡ ಎಂ. ನ್ಯಾಮಣ್ಣವರ, ವಡಗೇರಾ ಪೊಲೀಸ್ ಠಾಣೆಯ ಪಿ.ಎಸ್.ಐ ಸಿದರಾಯ ಬಳೂರ್ಗಿ, ಎಚ್‌ಸಿರಾಜಕುಮಾರ, ಮಹೇಂದ್ರ, ಯಾದಗಿರಿ ನಗರ ಠಾಣೆಯ ಗಜೇಂದ್ರ ಹಾಗೂ ಗುರುಮಠಕಲ್ ಠಾಣೆಯ ಗಣಪತಿ ಎಚ್.ಸಿ ಇವರನ್ನೊಳಗೊಂಡ ವಿಶೇಷ ತಂಡದ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಪತ್ತೆ ಮಾಡಿದ ತಂಡಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿ, ಬಹುಮಾನ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.