ADVERTISEMENT

‘ನಾಗರಿಕರಿಗೆ ಸೂಕ್ತ ನ್ಯಾಯ ಕೊಡಿಸಿ’

ಶಹಾಪುರ: ವಕೀಲರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 9:17 IST
Last Updated 4 ಡಿಸೆಂಬರ್ 2019, 9:17 IST
ಶಹಾಪುರ ವಕೀಲರ ಸಂಘದಲ್ಲಿ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಎಚ್‌.ಆರ್‌ ಕುಲಕರ್ಣಿ ಮಾತನಾಡಿದರು
ಶಹಾಪುರ ವಕೀಲರ ಸಂಘದಲ್ಲಿ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಎಚ್‌.ಆರ್‌ ಕುಲಕರ್ಣಿ ಮಾತನಾಡಿದರು   

ಶಹಾಪುರ: ಯುವ ವಕೀಲರು ಸದಾ ಅಧ್ಯಯನಶೀಲರಾಗಬೇಕು. ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಸಲಹೆ ಪಡೆದು ಕಲಾಪದಲ್ಲಿ ಭಾಗವಹಿಸಿ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಮಿನಿ ಅಭಿಪ್ರಾಯ ವ್ಯಕ್ತ ಪಡಿಸಿದರು.

ಇಲ್ಲಿನ ವಕೀಲರ ಸಂಘದಲ್ಲಿ ಮಂಗಳವಾರ ವಕೀಲರ ದಿನಾಚಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಕೀಲರಾಗುವರು ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕಾನೂನು ಜ್ಞಾನದ ವಿಷಯಗಳನ್ನು ಸಂಪೂರ್ಣವಾಘಿ ಅರಿಯಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ಕುಲಕರ್ಣಿ ಮಾತನಾಡಿ, ಯುವ ವಕೀಲರು ಕಲಾಪದಲ್ಲಿ ಭಾಗವಹಿಸುವ ಮುಂಚೆ ಪ್ರಕರಣದ ಬಗ್ಗೆ ಸಂಪೂರ್ಣವಾಗಿ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಂತೆ ಅಭ್ಯಾಸ ಮಾಡುವುದರ ಮೂಲಕ ಕಕ್ಷಿದಾರರಿಗೆ ನ್ಯಾಯ ಕೊಡಿಸಬೇಕು ಎಂದರು.

ಹಿರಿಯ ವಕೀಲರಾದ ಶ್ರೀನಿವಾಸರಾವ ಕುಲಕರ್ಣಿ ಮಾತನಾಡಿ, ಸಾರ್ವಜನಿಕ ಕಚೇರಿಗೆ ತೆರಳಿದಾಗ ಆಯಾ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ತಿಳಿದುಕೊಳ್ಳಬೇಕು.ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಪ್ರಯತ್ನಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.