ADVERTISEMENT

ಕಾರ ಹುಣ್ಣಿಮೆ ಕರಿ ದಿನ ಹೆಣ್ಣುಮಕ್ಕಳಿಗೆ ಕಲ್ಪಿತ ಮದುವೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 10:06 IST
Last Updated 25 ಜೂನ್ 2021, 10:06 IST

ಯಾದಗಿರಿ: ಸುರಪುರ ತಾಲ್ಲೂಕಿನ ಹೆಗ್ಗನದೊಡ್ಡಿ ಗ್ರಾಮಸ್ಥರು ಕಾರ ಹುಣ್ಣಿಮೆ ಅಂಗವಾಗಿ ಕರಿ ದಿನವಾದ ಶುಕ್ರವಾರ ಇಬ್ಬರು ಹೆಣ್ಣುಮಕ್ಕಳಿಗೆ ಕಲ್ಪಿತ ವಿವಾಹ ಮಾಡಿಸಿ, ಸಸಿ ಆಡುವ ಹಬ್ಬ ಆಚರಿಸಿದರು. ದೊಡ್ಡವರಿಗೆ ವಿವಾಹ ಮಾಡುವಂತೆಯೇ ಶಾಸ್ತ್ರೋಕ್ತವಾಗಿ ನಿಯಮಗಳನ್ನು ಪಾಲಿಸಿದರು.

ಕಾರ ಹುಣ್ಣಿಮೆ ರೈತರ ಹಬ್ಬವಾಗಿದೆ. ಎತ್ತುಗಳಿಗೆ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ನಡೆಸುವುದು ಸಂಪ್ರದಾಯ. ಆದರೆ, ಹೆಗ್ಗನದೊಡ್ಡಿ ಗ್ರಾಮದಲ್ಲಿ ಹುಣ್ಣಿಮೆಯ ಮರುದಿನ ಮಕ್ಕಳು ಸಸಿ ಹಬ್ಬ ಆಚರಿಸುವುದು ವಿಶೇಷವಾಗಿದೆ.

ವಧು-ವರರು ಸಸಿಗಳನ್ನು ನೆಟ್ಟರೆ ಒಳ್ಳೆಯ ಮಳೆ, ಬೆಳೆ ಬರುತ್ತದೆ ಎನ್ನುವ ನಂಬಿಕೆ ಗ್ರಾಮೀಣ ಭಾಗದಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.