ಕೆಂಭಾವಿ: ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರೈತರು ಎತ್ತುಗಳಿಂದ ಕರಿ ಹರಿಯುವ ಮೂಲಕ ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.
ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ಮುಂಗಾರು ಹಂಗಾಮಿನ ಮೊದಲ ಹಬ್ಬವೆಂದು ರೈತರು ಆಚರಿಸುತ್ತಾರೆ. ಈಗಾಗಲೇ ಹೊಲಗಳಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಈ ಮಧ್ಯೆ ಕಾರ ಹುಣ್ಣಿಮೆ ಆಚರಣೆಗೆ ಎಲ್ಲ ರೈತರು ವರ್ಷವಿಡೀ ತನ್ನ ಹೆಗಲಿಗೆ ಹೆಗಲಾಗಿ ದುಡಿಯುವ ದನಕರುಗಳಿಗೆ ಸಿಂಗರಿಸಿ, ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.