ADVERTISEMENT

ಯಾದಗಿರಿ ಜಿಲ್ಲೆಗೆ ವಿಶೇಷ ಅನುದಾನ ಘೋಷಿಸಲು ಕರವೇ ಮನವಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 4:19 IST
Last Updated 7 ಜನವರಿ 2021, 4:19 IST
ಯಾದಗಿರಿ ಜಿಲ್ಲೆಗೆ ವಿಶೇಷ ಅನುದಾನ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು
ಯಾದಗಿರಿ ಜಿಲ್ಲೆಗೆ ವಿಶೇಷ ಅನುದಾನ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು   

ಯಾದಗಿರಿ: ಜಿಲ್ಲೆಯ ಅಭಿವೃದ್ಧಿಗಾಗಿ ₹500 ಕೋಟಿ ವಿಶೇಷ ಅನುದಾನ ಘೋಷಣೆ ಮಾಡುವಂತೆ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಟಿ.ದಾಸನಕೇರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ನೂತನವಾಗಿ ರಚನೆಯಾದ ತಾಲ್ಲೂಕುಗಳಾದ ವಡಗೇರಾ, ಹುಣಸಗಿ, ಗುರುಮಠಕಲ್ ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು. ವಡಗೇರಾ ಗ್ರಾಮವನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಬೇಕು. ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಯಿಂದ ನೆರೆ ಹಾವಳಿಗೆ ತುತ್ತಾಗಿರುವ ಸಾರ್ವಜನಿಕರಿಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ ಪತ್ರ ಸಲ್ಲಿಸಿದರು.

ADVERTISEMENT

ಜಿಲ್ಲಾ ಮುಖಂಡರಾದ ಚಂದ್ರಶೇಖರ ಹಿರೇಮಠ, ಶರಣಗೌಡ ಅಬ್ಬೆತುಮಕೂರ, ಪರಶುರಾಮ ಒಡೆಯರ್, ರಾಮು ನಾಟೇಕಾರ, ವಾಸು ಬದ್ದೇಪಲ್ಲಿ, ಶ್ರೀಕಾಂತ ತೆಳಿಗೇರಿ, ಮಾರುತಿ ಬಳಿಚಕ್ರ, ರೆಡ್ಡಿ ಠಾಣಗುಂದಿ, ಶ್ರೀಶಾಂತ ಬಾಲಾಜಿ, ಆಶಪ್ಪ, ಶಿವು ನಕ್ಕಲ್ ಮಾರುತಿ, ವಿಶ್ವನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.