ADVERTISEMENT

ಯಾದಗಿರಿಯಿಂದ ಚನ್ನಾರೆಡ್ಡಿ, ಗುರುಮಠಕಲ್‌ನಿಂದ ಚಿಂಚನಸೂರಗೆ ಕಾಂಗ್ರೆಸ್ ಟಿಕೆಟ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 6:42 IST
Last Updated 6 ಏಪ್ರಿಲ್ 2023, 6:42 IST
ಬಾಬುರಾವ ಚಿಂಚನಸೂರು ಮತ್ತು ಚನ್ನಾರೆಡ್ಡಿ ಪಾಟೀಲ ತುನ್ನೂರು
ಬಾಬುರಾವ ಚಿಂಚನಸೂರು ಮತ್ತು ಚನ್ನಾರೆಡ್ಡಿ ಪಾಟೀಲ ತುನ್ನೂರು   

ಯಾದಗಿರಿ: ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ‌ ಮಾಡಲಾಗಿದೆ.

ಯಾದಗಿರಿಗೆ ಚನ್ನಾರೆಡ್ಡಿ ಪಾಟೀಲ ತುನ್ನೂರು‍, ಗುರುಮಠಕಲ್ ಕ್ಷೇತ್ರಕ್ಕೆ ಬಾಬುರಾವ ಚಿಂಚನಸೂರ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ಮೊದಲ ಪಟ್ಟಿಯಲ್ಲಿ ಶಹಾಪುರ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರ ಮತಕ್ಷೇತ್ರದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

26 ಜನ ಆಕಾಂಕ್ಷಿಗಳು: ಯಾದಗಿರಿ ಮತ್ತು ಗುರುಮಠಕಲ್ ಮತಕ್ಷೇತ್ರದಲ್ಲಿ 26 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದರು.
ಯಾದಗಿರಿಯಲ್ಲಿ 18 ಜನ ಟಿಕೆಟ್ ಆಕಾಂಕ್ಷಿಗಳು, ಗುರುಮಠಕಲ್ ಮತಕ್ಷೇತ್ರದಲ್ಲಿ 8 ಜನ ಆಕಾಂಕ್ಷಿಗಳಿದ್ದರು‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.