ಯಾದಗಿರಿ: ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಭಾನುವಾರ ಹರಿಸಲಾಗುತ್ತಿದೆ.
ಜಲಾಶಯಕ್ಕೆ 1.60 ಲಕ್ಷ ಕ್ಯುಸೆಕ್ ಒಳಹರಿವು ಇದ್ದು, 1.73 ಲಕ್ಷ ಕ್ಯುಸೆಕ್ ನೀರು ಹೊರ ಹರಿವು ಇದೆ. ಡ್ಯಾಂನ 24 ಗೇಟುಗಳನ್ನು 1.30 ಮೀಟರ್ ಎತ್ತರಿಸಲಾಗಿದೆ.
ಶನಿವಾರ ಸಂಜೆಯಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದು, ಹೊರ ಹರಿವೂ ಹೆಚ್ಚಳವಾಗಿದೆ.
ಭಾನುವಾರದ ನೀರಿನ ಮಟ್ಟ 491.12 ಮೀಟರ್ ಇದೆ. ಪ್ರಸ್ತುತ 28.33 ಟಿಎಂಸಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.