
ಕೆಂಭಾವಿ: ಪಟ್ಟಣ ಸಮೀಪದ ಪರಸನಹಳ್ಳಿ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕಿಯರು ಹೊಸಪೇಟೆಯಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕಿಯರ ಕಬಡ್ಡಿ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ರಾಜ್ಯ ಮಟ್ಟಕೆ ಆಯ್ಕೆಯಾಗಿದರು.
ವಿದ್ಯಾರ್ಥಿಗಳಾದ ಪಾರ್ವತಿ (ತಂಡದ ನಾಯಕಿ ), ವೇದಾ (ಉಪ ನಾಯಕಿ), ನಿಂಗಮ್ಮ, ಸವಿತಾ, ಸೃಷ್ಟಿ ಹಾಗೂ ಸಹಿಪ್ರಾ ಶಾಲೆ ಆಲ್ದಾಳ ವಿದ್ಯಾರ್ಥಿನಿಯರಾದ ದವಲಬಿ, ಬಿಂದು ಹಾಗೂ ಭೀಮಬಾಯಿ ವಿಭಾಗ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.
ವಿದ್ಯಾರ್ಥಿಗಳ ಸಾಧನೆಗೆ ಗ್ರಾಮದ ಗ್ರಾಮಸ್ಥರು ಪಟಾಕಿ ಸಿಡಿಸಿ ಬೈಕ್ರ್ಯಾಲಿ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯಶಿಕ್ಷಕ, ಸಹಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.