ಯಾದಗಿರಿ: ಮಕ್ಕಳ ಸಾಹಿತಿ ಹಾಗೂ ಕನ್ನಡ ರಾಜ್ಯೋತ್ಸವ ಪುರಸ್ಕೃತ ಚಂದ್ರಕಾಂತ ಕರದಳ್ಳಿ (67) ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನವರಾದ ಕರದಳ್ಳಿ ಕಾವ್ಯ ಕತೆ, ಕಾದಂಬರಿ, ಶಿಶುಪ್ರಾಸ , ಒಗಟು, ಪ್ರವಾಸ ಕಥನ ಸೇರಿ 50ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ.
2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಅಲ್ಲದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು.
ಗುರುವಾರ ಬೆಳಿಗ್ಗೆ 9.30 ರ ಸುಮಾರಿಗೆ ಸಚಿವ ಸುರೇಶಕುಮಾರ ಅವರನ್ನು ಭೇಟಿ ಮಾಡಿದ ನಂತರ ಎದೆನೋವು ಕಾಣಿಸಿಕೊಂಡು ಹಠಾತ್ ನಿಧರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.
ಕಲ್ಯಾಣ ಕರ್ನಾಟಕದ ಬಾಲ ಸಾಹಿತ್ಯ ಲೇಖಕ ಕರದಳ್ಳಿ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.