ADVERTISEMENT

ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ನಿಧನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 8:44 IST
Last Updated 19 ಡಿಸೆಂಬರ್ 2019, 8:44 IST
ಚಂದ್ರಕಾಂತ ಕರದಳ್ಳಿ
ಚಂದ್ರಕಾಂತ ಕರದಳ್ಳಿ   

ಯಾದಗಿರಿ: ಮಕ್ಕಳ ಸಾಹಿತಿ ಹಾಗೂ ಕನ್ನಡ ರಾಜ್ಯೋತ್ಸವ ಪುರಸ್ಕೃತ ಚಂದ್ರಕಾಂತ ಕರದಳ್ಳಿ (67) ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನವರಾದ ಕರದಳ್ಳಿ ಕಾವ್ಯ ಕತೆ, ಕಾದಂಬರಿ, ಶಿಶುಪ್ರಾಸ , ಒಗಟು, ಪ್ರವಾಸ ಕಥನ ಸೇರಿ 50ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ.

2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಅಲ್ಲದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು.

ADVERTISEMENT

ಗುರುವಾರ ಬೆಳಿಗ್ಗೆ 9.30 ರ ಸುಮಾರಿಗೆ ಸಚಿವ ಸುರೇಶಕುಮಾರ ಅವರನ್ನು ಭೇಟಿ ಮಾಡಿದ ನಂತರ ಎದೆನೋವು ಕಾಣಿಸಿಕೊಂಡು ಹಠಾತ್‌ ನಿಧರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.

ಕಲ್ಯಾಣ ಕರ್ನಾಟಕದ ಬಾಲ ಸಾಹಿತ್ಯ ಲೇಖಕ ಕರದಳ್ಳಿ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.