ಯಾದಗಿರಿ: ನಾಲ್ಕು ದಶಕಗಳ ರಾಜಕೀಯ ವೈರತ್ವವನ್ನು ಮರೆತು ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ– ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಜೊತೆಯಾಗಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಾಗನಗೌಡ ಅವರ ಜೊತೆ ಸಂಧಾನ ನಡೆಸಿದರು ಪ್ರಯೋಜನವಾಗಲಿಲ್ಲ. ಕೊನೆಗೆ ಮಲ್ಲಿಕಾರ್ಜುನ ಖರ್ಗೆ ಅವರೇ ನಾಗನಗೌಡ ಕಂದಕೂರ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಹಳೆಯ ಮನಸ್ತಾಪವನ್ನು ಮರೆತು ಜೊತೆಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ 40 ವರ್ಷಗಳ ದ್ವೇಷ ಮರೆತು ಕಂದಕೂರ ಪ್ರಚಾರಕ್ಕೆ ಧುಮುಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.