ADVERTISEMENT

ಕ್ಷುಲ್ಲಕ ರಾಜಕೀಯ ಕಾರಣ: ತಾಂಡಾದಲ್ಲಿ ವ್ಯಕ್ತಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 10:28 IST
Last Updated 2 ಜನವರಿ 2021, 10:28 IST

ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಗೋಗಿ ತಾಂಡಾದಲ್ಲಿ ಕ್ಷುಲ್ಲಕ ರಾಜಕೀಯ ಕಾರಣದಿಂದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.

ಕೇಮು ವಾಲು ರಾಥೋಡ್ (55) ಎನ್ನುವವರು ಕೊಲೆಯಾದವರು.

ಹೋಟೆಲ್ ಗೆ ಚಹಾ ಕುಡಿಯಲು ತೆರಳಿದಾಗ ಹಲ್ಲೆ ಮಾಡಲಾಗಿದೆ‌ ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಕೇಮು ಸಾವನ್ನಪ್ಪಿದ್ದಾರೆ.

ADVERTISEMENT

ಘಟನೆ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.