ADVERTISEMENT

ಗುರುಮಠಕಲ್‌: ಆಸ್ತಿಗಾಗಿ ಬೆಳೆದ ವೈಷಮ್ಯ ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2024, 13:11 IST
Last Updated 8 ಮಾರ್ಚ್ 2024, 13:11 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಗುರುಮಠಕಲ್‌ (ಯಾದಗಿರಿ ಜಿಲ್ಲೆ): ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಶುಕ್ರವಾರ (ಮಾ.8) ರಂದು ಜರುಗಿದೆ.

ಕೊಲೆಯಾದ ವ್ಯಕ್ತಿಯನ್ನು ಚಂಡರಕಿ ಗ್ರಾಮದ ನರಸಿಂಹುಲು ಜಲ್ಲ (52) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಯುವಕ ರಮೇಶ ನರಸಪ್ಪ ತೂಮು (23) ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.

ADVERTISEMENT

ಗುರುಮಠಕಲ್‌-ಚಂಡರಕಿ ರಸ್ತೆಯಲ್ಲಿ ಘಟನೆ ಜರುಗಿದ್ದು, ಮೃತ ನರಸಿಂಹುಲು ಜಲ್ಲನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಸದ್ಯ ಯುವಕ ಪೊಲೀಸ್‌ ವಶದಲ್ಲಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.