ADVERTISEMENT

ಯಾದಗಿರಿ: ಸಾರಿಗೆ ಬಸ್ ಪಲ್ಟಿ – ನಾಲ್ವರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 7:48 IST
Last Updated 14 ಸೆಪ್ಟೆಂಬರ್ 2021, 7:48 IST
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ   

ಯಾದಗಿರಿ: ಸುರಪುರದಿಂದ ಯಾದಗಿರಿಗೆ ಪ್ರಯಾಣಿಸುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿದೆ.

ಶಹಾಪುರ ತಾಲ್ಲೂಕಿನ ಅನವಾರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿ 31 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ.

ರಂಜಿತ, ಶಿವಕುಮಾರ, ಸಾಬಣ್ಣ, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

21 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರನ್ನು ಶಹಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನವಾರ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಹೊಲದಲ್ಲಿ ಉರುಳಿ ಬಿದ್ದಿದೆ. ಚಾಲಕ ಪರಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.