ಯಾದಗಿರಿ: ನಗರದ ಜಿಲ್ಲಾ ಆಸ್ಪತ್ರೆಗೆ ಸೋಮವಾರ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ಜಿಲ್ಲಾಸ್ಪತ್ರೆಯ ಸಮಸ್ಯೆ ಬಗ್ಗೆ ಪರಿಶೀಲಿಸಿದರು.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದಿರುವುದರಿಂದ ಅಗತ್ಯ ವೈದ್ಯ ಸಿಬ್ಬಂದಿ ನೇಮಕಾತಿಗೆ ಪತ್ರಿಕಾ ಅಧಿಸೂಚನೆ ಹೊರಡಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಜೀವ್ ಕುಮಾರ ರಾಯಚೂರಕರ ಅವರಿಗೆ ಸೂಚಿಸಿದರು.
ಅಲ್ಲದೇ ಐಸಿಯು ಪ್ರಾರಂಭಿಸಲು ಆಯುಕ್ತರ ಜತೆ ಈ ಸಂಬಂಧ ಮಾತನಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.