ADVERTISEMENT

ಪಿಎಸ್‌ಐ ಸಾವು; ಸಮಗ್ರ ತನಿಖೆಯಾಗಲಿ: ಸಚಿವ ಶರಣಬಸಪ್ಪ ದರ್ಶನಾಪುರ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 15:14 IST
Last Updated 3 ಆಗಸ್ಟ್ 2024, 15:14 IST
ಶರಣಬಸಪ್ಪ ದರ್ಶನಾಪುರ
ಶರಣಬಸಪ್ಪ ದರ್ಶನಾಪುರ    

ಶಹಾಪುರ: ‘ಯಾದಗಿರಿ ನಗರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿ.ಎಸ್.ಐ ಪರಶುರಾಮ ನಿಧನರಾಗಿದ್ದಾರೆ. ಅವರ ಸಾವಿನ ಸಮಗ್ರ ತನಿಖೆಯಾದಲ್ಲಿ ನಿಜಾಂಶ ಹೊರಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಸದರಿ ಪ್ರಕರಣದ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡಿ ಮಾಹಿತಿ ನೀಡಿದೆ. ಬೆಳಿಗ್ಗೆ ಅಸ್ವಾಭಾವಿಕ ಸಾವು ಎಂದು ದಾಖಲಾಗಿತ್ತು. ಪರಶುರಾಮ ಅವರ ಪತ್ನಿ ದೂರು ನೀಡಿದ ಮೇಲೆ ಪರಿಶಿಷ್ಟ ಜಾತಿ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ದೂರು ದಾಖಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಬೇರೆಡೆ ವರ್ಗಾವಣೆಗೊಂಡಾಗ ಸಹಜವಾಗಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಡೆತ್‌ನೋಟ್ ಬರೆದು ಇಟ್ಟಿಲ್ಲ. ಸಮಗ್ರವಾದ ತನಿಖೆಯಿಂದ ಸತ್ಯಾಂಶ ಹೊರಬರಲಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.