ADVERTISEMENT

‘ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 24 ಮೇ 2022, 4:40 IST
Last Updated 24 ಮೇ 2022, 4:40 IST
ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಯಮನಪ್ಪ ಕೊಡ್ಲಿ ಕುಟುಂಬಕ್ಕೆ ಶಾಸಕ ರಾಜೂಗೌಡ ಚೆಕ್ ವಿತರಿಸಿದರು
ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಯಮನಪ್ಪ ಕೊಡ್ಲಿ ಕುಟುಂಬಕ್ಕೆ ಶಾಸಕ ರಾಜೂಗೌಡ ಚೆಕ್ ವಿತರಿಸಿದರು   

ಹುಣಸಗಿ: ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟ ಯಮನಪ್ಪ ಕೊಡ್ಲಿ ಅವರ ಕುಟುಂಬಕ್ಕೆ ಶಾಸಕ ರಾಜೂಗೌಡ ₹4 ಲಕ್ಷದ ಪರಿಹಾರದ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೂಗೌಡ,‘ಬೇಸಿಗೆ ಮುಗಿಯುವ ಹಂತದಲ್ಲಿ ಆಗಾಗ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ರೈತರು ಹಾಗೂ ಕಾರ್ಮಿಕರು ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ಪಡೆದುಕೊಳ್ಳಬೇಕು. ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ಹೇಳಿದರು.

ಗದ್ದೆಮ್ಮ ಯಮನಪ್ಪ ಅವರಿಗೆ ಪರಿಹಾರದ ಚೆಕ್‌ ಜತೆಗೆ ವೈಯಕ್ತಿಕವಾಗಿ ₹50 ಸಾವಿರ ನೀಡಿದರು.

ADVERTISEMENT

ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕ್, ಉಪತಹಶೀಲ್ದಾರ್ ಬಸವರಾಜ ಬಿರಾದಾರ ಸೇರಿದಂತೆ ಗ್ರಾಮದ ಪ್ರಮುಖರು ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.