ADVERTISEMENT

ಚಿನ್ನದ ಓಲೆಗಾಗಿ ಕೊಲೆ; ಬಂಧನ

​ಪ್ರಜಾವಾಣಿ ವಾರ್ತೆ
Published 28 ಮೇ 2020, 17:21 IST
Last Updated 28 ಮೇ 2020, 17:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುರುಮಠಕಲ್: ಇಲ್ಲಿಗೆ ಸಮೀಪದ ಚಂಡರಕಿ ಗ್ರಾಮದಲ್ಲಿ ಮಂಗಳವಾರ ಜರುಗಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಚಂಡರಕಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಲಕ್ಷ್ಮಣ ವೆಂಕಟಪ್ಪ ಮುಷ್ಟಿ (22) ಕುಡಿತ ಹಾಗೂ ಇಸ್ಪೀಟ್ ಆಟಕ್ಕಾಗಿ ಹಣವನ್ನು ಹೊಂದಿಸಿಕೊಳ್ಳಲು ಕೊಲೆ ಮಾಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ಕುರಿಗಾಹಿ ಭೀಮಪ್ಪ ಸಮನೋಳ ಅರೆ ಬುದ್ಧಿಮಾಂದ್ಯನಾಗಿದ್ದನು. ಆತನ ಕಿವಿಯಲ್ಲಿದ್ದ ಚಿನ್ನದ ಓಲೆಯನ್ನು ಕದಿಯುವ ಉದ್ದೇಶದಿಂದ ಮದ್ಯ ಕುಡಿಸಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆರೋಪಿಗೆ ಕೊರೊನಾ ಪರೀಕ್ಷೆ ನಡೆಸಿ ಕಲಬುರ್ಗಿಯ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.