ADVERTISEMENT

ಸೈದಾಪುರ ಹೊರವಲಯದಲ್ಲಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 12:09 IST
Last Updated 6 ನವೆಂಬರ್ 2021, 12:09 IST
ಸಾಬಯ್ಯ
ಸಾಬಯ್ಯ   

ಸೈದಾಪುರ: ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸಮೀಪದ ನಾಗ್ಲಾಪುರ ಗ್ರಾಮದ ಸಾಬಯ್ಯ ಯಲ್ಲಪ್ಪ (30) ಕೊಲೆಯಾದ ಯುವಕ. ದುಷ್ಕರ್ಮಿಗಳು ಯುವಕನಿಗೆ ಕಲ್ಲಿನಿಂದ ಹೊಡೆದಿದ್ದರು ಎಂದು ತಿಳಿದು ಬಂದಿದೆ.

ಪಟ್ಟಣದ ಹೊರವಲಯದ ಕರಿಬೆಟ್ಟ ಕ್ರಾಸ್ ಹತ್ತಿರ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಹತ್ತಿ ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಯುವಕನ್ನು ಆಂಬುಲೆನ್ಸ್ ಮೂಲಕ ಸೈದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆರೋಗ್ಯ ಕೇಂದ್ರದಲ್ಲಿ ಯುವಕ ಕೊನೆಯುಸಿರೆಳೆದಿದ್ದಾನೆ.

ADVERTISEMENT

ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.