ಯಾದಗಿರಿ: ನಗರದ ಪದವಿ ಪೂರ್ವ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ಗಾಗಿ 6 ಜನ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ವಾಪಸ್ ಆದಘಟನೆ ಸೋಮವಾರ ನಡೆದಿದೆ.
ಪಿಯುಸಿ ಕಲಾ ವಿಭಾಗದ ಅರ್ಥಶಾಸ್ತ್ರ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಬಹಿಷ್ಕರಿಸಿದ್ದಾರೆ.
'ಹಿಜಾಬ್ಗಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದಕ್ಕೆ ಪರೀಕ್ಷಾ ಮೇಲ್ವಿಚಾಲಕರು ನಿರಾಕರಿಸಿದ್ದರಿಂದ ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ' ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.