ADVERTISEMENT

ನಾರಾಯಣಪುರ: ಎಡದಂಡೆ ಕಾಲುವೆಗೆ ನೀರು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 1:19 IST
Last Updated 7 ಏಪ್ರಿಲ್ 2021, 1:19 IST
ಹುಣಸಗಿ ಸಮೀಪದ ನಾರಾಯಣಪುರ ಎಡದಂಡೆ ಮುಖ್ಯಕಾಲುವೆಗೆ ನೀರು ಸ್ಥಗಿತಗೊಳಿಸಲಾಗಿದೆ
ಹುಣಸಗಿ ಸಮೀಪದ ನಾರಾಯಣಪುರ ಎಡದಂಡೆ ಮುಖ್ಯಕಾಲುವೆಗೆ ನೀರು ಸ್ಥಗಿತಗೊಳಿಸಲಾಗಿದೆ   

ಹುಣಸಗಿ: ಸೋಮವಾರ (ಏ.5) ರಾತ್ರಿಯಿಂದ ನಾರಾಯಣಪುರ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ.ಮೊದಲು ಮಾ. 31 ರವರೆಗೆ ನೀರು ಹರಿಸಲು ನಿರ್ಧರಿಸಲಾಗಿತ್ತು.

ಸುರಪುರ ಶಾಸಕ ರಾಜೂಗೌಡ ಅವರು ಉಪ ಮುಖ್ಯಮಂತ್ರಿ, ಐಸಿಸಿ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಏ.5 ರವರೆಗೂ ನೀರು ಹರಿಸುವಂತೆ ಮನವಿ ಮಾಡಿದ್ದರು. ಆದ್ದರಿಂದ ಏ. 5 ರವರೆಗೂ ನೀರು ಹರಿಸಲಾಯಿತು.

ಏ.10 ರವರೆಗೂ ನೀರು ಹರಿಸಬೇಕು ಎಂದು ಹಲವು ಸಂಘಟನೆಗಳು ಹಾಗೂ ಪ್ರಮುಖರು ಮನವಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.