ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರಸ್ವೀಕರಿಸಿದರು. ಕಳೆದ ಮೂರು ತಿಂಗಳಿನಿಂದ ಡಿಡಿಪಿಐ ಹುದ್ದೆ ಖಾಲಿಯಾಗಿ ಉಳಿದಿತ್ತು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನೂತನ ಡಿಡಿಪಿಐ, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದೇನೆ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಭೇಟಿಯಾಗಿ ವರದಿ ಮಾಡಿದ್ದೇನೆ. ಒಂದು ವಾರದ ನಂತರ ಜಿಲ್ಲೆಯ ಶೈಕ್ಷಣಿಕ ಮಟ್ಟ ಸುಧಾರಿಸುವ ಬಗ್ಗೆ ಸಮಗ್ರ ವರದಿ ನೀಡುತ್ತೇನೆ ಎಂದು ತಿಳಿಸಿದರು.
ಈ ವೇಳೆಡಿಡಿಪಿಐ ಕಚೇರಿಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.