ಯಾದಗಿರಿ:ನೂತನ ಎಸ್ ಪಿ ರಿಷಿಕೇಶ್ ಭಾಗವಾನ ಶುಕ್ರವಾರ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಂಟ್ವಾಳ ಮತ್ತು ಕಾರ್ಕಳ ಉಪ ವಿಭಾಗದಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಡ್ತಿ ಪಡೆದು ಜನವರಿಯಿಂದ ಬೆಂಗಳೂರಿನ ಆ್ಯಂಟಿ ಕರೆಪ್ಷನ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಕ್ರಮ ಮರಳು ದಂಧೆ ನಿಯಂತ್ರಣ, ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಇದೇ ಸಂದರ್ಭದಲ್ಲಿ ರಿಷಿಕೇಶ್ ಭಾಗವಾನ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.