ಯಾದಗಿರಿ: ಕೃಷ್ಣಾ ಮತ್ತು ಭೀಮಾ ನದಿ ಪ್ರವಾಹದಿಂದ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಪರಿಹಾರ ಪರಿಶೀಲನೆಗೆ ಬಂದಿದ್ದ ಸಚಿವರಾದ ಶ್ರೀರಾಮುಲು ಮತ್ತು ಪ್ರಭು ಚವಾಣ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯ ನಂತರ ಸಂತ್ರಸ್ತರ ಭೇಟಿಗೆ ತೆರಳಬೇಕಿದ್ದ ಅವರು,ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ಆಶ್ರಮಕ್ಕೆ ಭೇಟಿ ನೀಡಿದರು. ಸಂಜೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರ ಅಹವಾಲು ಆಲಿಸಿದರು.
ಶಿಸ್ತು ಕ್ರಮ: ‘ಭೀಮಾ ನದಿಗೆ ಹೆಚ್ಚಿನ ನೀರು ಹರಿಸುವ ಮಾಹಿತಿ ಇದ್ದರೂ ವಡಗೇರಾ ತಾಲ್ಲೂಕಿನ ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ನ ಗೇಟ್ಗಳನ್ನು ಕೆಬಿಜೆಎನ್ಎಲ್ ಅಧಿಕಾರಿಗಳು ತೆರೆದಿಲ್ಲ. ಇದರಿಂದ ಹಿನ್ನೀರು ಮತ್ತಷ್ಟು ವ್ಯಾಪಿಸಿ ಬೆಳೆ ಹಾನಿಯಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಕೊಪ್ಪಳ ವರದಿ:ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಅವಲೋಕನಕ್ಕೆ ಬಂದಿದ್ದ ಸಚಿವ ಸಿ.ಸಿ. ಪಾಟೀಲ ಸಹಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.