ADVERTISEMENT

ಪರಿಹಾರ ಹಿಂಪಡೆಯಲು ನಿರ್ಧರಿಸಿಲ್ಲ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 12:12 IST
Last Updated 26 ಡಿಸೆಂಬರ್ 2019, 12:12 IST
ಶ್ರೀರಾಮುಲು
ಶ್ರೀರಾಮುಲು   

ಶಹಾಪುರ (ಯಾದಗಿರಿ ಜಿಲ್ಲೆ): ‘ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ₹ 10 ಲಕ್ಷ ಪರಿಹಾರ ಕೊಡುವ ನಿರ್ಣಯವನ್ನು ಹಿಂಪಡೆದಿಲ್ಲ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಪರಿಹಾರ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಗೋಲಿಬಾರ್ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಯುತ್ತಿದೆ. ಸಿ.ಸಿ ಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ವಿವಿಧ ಮೂಲಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಇನ್ನೂ ಪೂರ್ಣಪ್ರಮಾಣದ ಚಿತ್ರಣ ದೊರೆತಿಲ್ಲ. ಹೀಗಾಗಿ ಪರಿಹಾರ ಹಿಂಪಡೆಯುವ ಕುರಿತು ಸರ್ಕಾರ ಇನ್ನೂ ನಿರ್ಧರಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT