ADVERTISEMENT

ಕೊರೊನಾ ವಾರಿಯರ್ಸ್‌ಗಳಸೇವೆ ಶ್ಲಾಘನೀಯ: ಮುದ್ನಾಳ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 15:49 IST
Last Updated 9 ಜೂನ್ 2020, 15:49 IST
ಯಾದಗಿರಿ ನಗರ ಹೊರವಲಯದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ಸಿಬ್ಬಂದಿಗೆ ಬಿಜೆಪಿ ಯುವ ಮುಖಂಡ ಮಹೇಶಗೌಡ ಮುದ್ನಾಳ ಆಹಾರದ ಕಿಟ್ ವಿತರಿಸಿದರು
ಯಾದಗಿರಿ ನಗರ ಹೊರವಲಯದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ಸಿಬ್ಬಂದಿಗೆ ಬಿಜೆಪಿ ಯುವ ಮುಖಂಡ ಮಹೇಶಗೌಡ ಮುದ್ನಾಳ ಆಹಾರದ ಕಿಟ್ ವಿತರಿಸಿದರು   

ಯಾದಗಿರಿ: ಕೋವಿಡ್‌ ಸೋಂಕಿತರ ಸೇವೆಯಲ್ಲಿ ತೊಡಗಿಕೊಂಡಿರುವ ವೈದ್ಯರ, ಸಿಬ್ಬಂದಿ ಸೇವೆ ಶ್ಲಾಘನೀಯ ಎಂದು ಬಿಜೆಪಿ ಯುವ ಮುಖಂಡ ಮಹೇಶಗೌಡ ಮುದ್ನಾಳ ಶ್ಲಾಘಿಸಿದರು.

ನಗರ ಹೊರವಲಯದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ರೋಗಿಗಳನ್ನು ವೈರಸ್‌ನಿಂದ ಮುಕ್ತಿಗೊಳಿಸಲು ಕೊರೊನಾ ವಾರಿಯರ್ಸ್ ತಮ್ಮ ಜೀವದ ಹಂಗು ತೊರೆದು ಹರಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರನ್ನು ಪ್ರತಿಯೊಬ್ಬರುಗುರುತಿಸಿ ಗೌರವಿಸುವುದು ನಾಗರಿಕರ ಕರ್ತವ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುಧೀರ್ ಪಾಟೀಲ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್, ಮೇಲ್ವಿಚಾರಕ ಶ್ರೀನಿವಾಸ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.