ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳ ಗ್ರಾಮದ ಕೊಟ್ಟಿಯಲ್ಲಿದ್ದ ಎರಡು ಎತ್ತು, ಆಕಳು, ಎಮ್ಮೆ ಸಿಡಿಲು ಬಡಿತಕ್ಕೆ ಸಾವನ್ನಪ್ಪಿವೆ.
ಭೀಮರಾಯ ಹಣಮಂತರಾಯ ಅವರಿಗೆ ಸೇರಿದ ಜಾನುವಾರು ಬುಧವಾರ ಬೆಳಗಿನ ಜಾವ 1 ಗಂಟೆ ಸಿಡಿಲಾಘಾತಕ್ಕೆ ಸಾವನ್ನಪ್ಪಿವೆ. ನಾಲ್ಕು ಜಾನುವಾರು ಅಂದಾಜು ₹2 ಲಕ್ಷ ಮೌಲ್ಯ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ: ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಎರಡರಿಂದ ಮೂರು ಗಂಟೆ ಕಾಲ ಮಳೆಯಾಗಿದೆ. ಇದರಿಂದ ಕೆಲ ಜಮೀನುಗಳಲ್ಲಿ ನೀರು ನಿಂತಿವೆ.
ಹತ್ತಿ ಬೆಳೆಗೆ ರೋಗ:ಅಧಿಕ ಮಳೆಯಿಂದ ಹತ್ತಿ ಬೆಳೆ ರೋಗ ಬಾಧೆಗೆ ತುತ್ತಾಗುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.