ADVERTISEMENT

ಬಂದಳ್ಳಿ ಪಿಡಿಒ ಅಮಾನತು

ನಿಯಮಬಾಹಿರವಾಗಿ ಹಣ ವೆಚ್ಚ ಮಾಡಿದ ಆರೋಪ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:09 IST
Last Updated 25 ಜೂನ್ 2021, 4:09 IST

ಯಾದಗಿರಿ: ತಾಲ್ಲೂಕಿನ ಬಂದಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರಿಮಲ್ಲಣ್ಣ ಅವರು ನಿಯ ಮಬಾಹಿರವಾಗಿ ₹ 27 ಲಕ್ಷ ವೆಚ್ಚ ಮಾಡಿ ರುವ ಆರೋಪದಡಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಅಧ್ಯಕ್ಷೆ ಅನು ರಾಧ ವೀರಭದ್ರಪ್ಪ ಯಡ್ಡಳ್ಳಿ ಅಧಿಕಾರಾ ವಧಿಯಲ್ಲಿ ಪಂಚಾಯಿತಿಯ 14ನೇ ಹಣಕಾಸು ಯೋಜನೆಯ ಅನುದಾನ ಮತ್ತು ಕರ ವಸೂಲಾತಿಯಲ್ಲಿ ಜಮಾ ವಾದ ₹ 27,22,909 ಹಣವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಲಾ ಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷೆ ದೇವಿಬಾಯಿ ಪರಶುರಾಮ ಚಬಾಣ್‌ ದೂರಿದ್ದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದ ಕಾರಣ ಅಧಿಕಾರಿಗಳ ತಂಡ ಪರಿಶೀಲನೆ ಮಾಡಿ ಜಿಲ್ಲಾಪಂಚಾಯಿತಿಗೆ ಸಲ್ಲಿಸಿದ ವರದಿಯಲ್ಲಿ ಪಿಡಿಒ ಲೋಪವೆ ಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT