ADVERTISEMENT

ಬಿಎಸ್‌ವೈ ವಿರುದ್ಧದ ಪ್ರಕರಣ ಮುಂದುವರಿಕೆಗೆ ಬಿಜೆಪಿ ನಾಯಕರಿಂದಲೇ ಒತ್ತಡ: ಶರಣಗೌಡ

ಆಪರೇಷನ್‌ ಕಮಲದ ಆಡಿಯೊ ಪ್ರಕರಣ: ಕಾನೂನು ಹೋರಾಟ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 10:49 IST
Last Updated 15 ಸೆಪ್ಟೆಂಬರ್ 2019, 10:49 IST
ಶರಣಗೌಡ ಕಂದಕೂರ
ಶರಣಗೌಡ ಕಂದಕೂರ   

ಯಾದಗಿರಿ: ‘ಆಪರೇಷನ್ ಕಮಲಕ್ಕಾಗಿ ಬಿ.ಎಸ್‌.ಯಡಿಯೂರಪ್ಪ ಅವರು ನನಗೆ ಹಣದ ಆಮಿಷವೊಡ್ಡಿದ ಪ್ರಕರಣ ಮುಂದುವರಿಸುವಂತೆಬಿಜೆಪಿಯ ಅಗ್ರಗಣ್ಯ ನಾಯಕರೊಬ್ಬರು ಹೇಳಿದ್ದಾರೆ. ನನ್ನ ಜೊತೆ ಫೋನ್‌ನಲ್ಲಿ ಸಂಭಾಷಣೆ ನಡೆಸಿರುವ ಈ ನಾಯಕರು, ಯಡಿಯೂರಪ್ಪಗೆಖೆಡ್ಡಾ ತೋಡುತ್ತಿದ್ದಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ರಾಜ್ಯ ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಹೇಳಿದರು.

ಹೈದರಾಬಾದ್‌ ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಯ ಮುಖ್ಯಮಂತ್ರಿ ವಿವೇಚನಾ ನಿಧಿಯಿಂದ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದ ಅನುದಾನವನ್ನು ಯಡಿಯೂರಪ್ಪ ವಾಪಸ್‌ ಪಡೆದಿದ್ದಕ್ಕೆ ಗುರುಮಠಕಲ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ‌ಮಾತನಾಡಿದ ಅವರು, ‘ನನ್ನ ಮುಖಾಂತರ ಬಿಜೆಪಿಯವರು ಯಡಿಯೂರಪ್ಪರಿಗೆ ಖೆಡ್ಡಾ ತೋಡಿದ್ದಾರೆ. ಇನ್ನೆರಡು ದಿನದಲ್ಲಿ ನಮ್ಮ ನಾಯಕರನ್ನು ಭೇಟಿಯಾಗಿ ಆ ಪ್ರಕರಣದ ಬಗ್ಗೆ ಚರ್ಚಿಸುವೆ.ಯಡಿಯೂರಪ್ಪಅವರಿಗೆ ಒಂದು ಗತಿ ಕಾಣಿಸುವೆ’ ಎಂದರು.

‘ಯಡಿಯೂರಪ್ಪ ಹತಾಶರಾಗಿದ್ದು, ಅವರ ಅಧಿಕಾರ ಅವಧಿ ಐದಾರು ತಿಂಗಳು ಮಾತ್ರ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.