ADVERTISEMENT

ಸುರಪುರ; ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 6:28 IST
Last Updated 22 ಫೆಬ್ರುವರಿ 2023, 6:28 IST
ಸುರಪುರದಲ್ಲಿ ಮಂಗಳವಾರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು
ಸುರಪುರದಲ್ಲಿ ಮಂಗಳವಾರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು   

ಸುರಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿಭಾಗೀಯ ಪ್ರಮುಖ ಉಪೇಂದ್ರನಾಯಕ ಸುಬೇದಾರ ಮಾತನಾಡಿ, ‘ಗುಲಬರ್ಗಾ ವಿಶ್ವವಿದ್ಯಾಲಯ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುತ್ತಿಲ್ಲ. ಉದ್ದೇಶಪೂರ್ವಕವಾಗಿ ಅಂಕಗಳ ಬದಲಾವಣೆ, ಆವಕದಲ್ಲಿ ಕೊಟ್ಟ ಅರ್ಜಿಯ ನಿರ್ಲಕ್ಷ್ಯ, ಕುಂಟು ನೆಪ ಹೇಳಿ ಫಲಿತಾಂಶ ತಡೆ ಹಿಡಿಯುವುದು, ಘಟಿಕೋತ್ಸವ ಸರಿಯಾದ ಸಮಯಕ್ಕೆ ಮಾಡುತ್ತಿಲ್ಲ’ ಎಂದು ಆರೋಪಿಸಿದರು.

‘ಪದವಿ ಪರೀಕ್ಷಾ ಕೇಂದ್ರಗಳಿಗೆ ಅನರ್ಹ ಮೇಲ್ವಿಚಾರಕರನ್ನು ನೇಮಿಸುವುದು, ಹೊಸ ಪದವಿ ಕಾಲೇಜುಗಳ ಅನುಮತಿಯಲ್ಲಿ ಭ್ರಷ್ಟಾಚಾರ ಹೀಗೆ ವಿಶ್ವವಿದ್ಯಾಲಯ ಸಮಸ್ಯೆಗಳ ಸರಮಾಲೆಯನ್ನೇ ಹೊದ್ದು ನಿಂತಿದೆ. ರಾಜ್ಯಪಾಲರು ಈ ಬಗ್ಗೆ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಹನುಮಂತ ಸಿಂಗೆ, ವಿನೋದಕುಮಾರ, ಮಾರುತಿ, ದ್ಯಾವಣ್ಣ, ಮಹೆಬೂಬ, ವಿಶ್ವನಾಥ, ಭಾರ್ಗವನಾಯಕ, ಪಿಡ್ಡಪ್ಪ, ಶ್ರೀನಿವಾಸ, ಮುಸ್ಕಾನ, ರಾಧಿಕಾ, ಕಾವ್ಯಾ, ಬಸಮ್ಮ, ಉಮಾಶ್ರೀ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.