ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಚಿತ್ರ ಇದ್ದ ಫಲಕಕ್ಕೆ ಕಿಡಿಗೇಡಿಗಳು ಭಾನುವಾರ ರಾತ್ರಿ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.
ಇದರಿಂದ ಆಕ್ರೋಶಗೊಂಡ ದಲಿತ ಸಂಘಟನೆ ಮುಖಂಡರು ಸೋಮವಾರ ಬೆಳಿಗ್ಗೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು.
ಕೃತ್ಯ ಎಸಗಿದವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.