ಯಾದಗಿರಿ: ಲಾಕ್ಡೌನ್ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ 15 ಕೇರಳ ಶಿಕ್ಷಕರು, ವಿದ್ಯಾರ್ಥಿಗಳನ್ನುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆರವಿನಿಂದ ಕೇರಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲೆಯಿಂದ ಹೊರಟರು.
ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ವಿದ್ಯಾರ್ಥಿಗಳು ಲಾಕ್ಡೌನ್ ಸಂದರ್ಭದಲ್ಲಿನಗರದ ಚಿರಂಜೀವಿನಗರದಲ್ಲಿ ವಾಸವಾಗಿದ್ದರು. ಆದರೆ, ಶಾಲೆಗಳು ಪುನಾರಂಭಕ್ಕೆ ಸಾಕಷ್ಟು ಸಮಯ ಇರುವುದರಿಂದ ತಮ್ಮ ತವರೂ ಕೇರಳಕ್ಕೆ ತೆರಳಲು ರಾಹುಲ್ ಗಾಂಧಿ ಅವರಿಗೆ ಇ–ಮೇಲ್ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ರಾಯಚೂರಿನ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರಿಗೆ ಗಾಂಧಿ ತಿಳಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಕೇರಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.
‘ಅದರಂತೆ ಮಂಗಳವಾರ ಸಂಜೆ 7 ಗಂಟೆಗೆ 15 ಜನರನ್ನುಥರ್ಮಲ್ ಸ್ಯಾನಿಂಗ್ ಮಾಡಿ ಬಸ್ ಮೂಲಕಕೇರಳದ ಕೊಲ್ಲಂ ಜಿಲ್ಲೆಗೆ ಕಳುಹಿಸಿಕೊಡಲಾಯಿತು’ ಎಂದು ಕೋವಿಡ್ ನೋಡಲ್ ಅಧಿಕಾರಿ ರಘುವೀರ್ ಸಿಂಗ್ ಠಾಕೂರ್ ತಿಳಿಸಿದರು.ಈ ವೇಳೆ ಎಸ್ಡಿಸಿ ಸಾಯಿಪ್ರಕಾಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.