ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ನಗರ ಸೇರಿದಂತೆ ವಿವಿಧ ಕಡೆ ಮಳೆಯಾಗಿದ್ದು, ವಾತಾವರಣ ತಂಪಿನಿಂದ ಕೂಡಿತ್ತು. ನಗರದಲ್ಲಿ ಸೋಮವಾರ ಬೆಳಿಗ್ಗೆಯಿಂದ ಆಗಾಗ ತುಂತುರು ಮಳೆಯಾಯಿತು.
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಸುರಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹುಣಸಗಿಯಲ್ಲಿ ಕಡಿಮೆ ಮಳೆಯಾಗಿದೆ.
ಎಂಎಂ ಮಳೆ ವಿವರ:
ಶಹಾಪುರ ತಾಲ್ಲೂಕಿನಲ್ಲಿ 1.1 ಎಂಎಂ, ಸುರಪುರ ತಾಲ್ಲೂಕಿನಲ್ಲಿ 9.8, ಯಾದಗಿರಿ ತಾಲ್ಲೂಕಿನಲ್ಲಿ 9, ಗುರುಮಠಕಲ್ ತಾಲ್ಲೂಕಿನಲ್ಲಿ 6.6, ವಡಗೇರಾ ತಾಲ್ಲೂಕಿನಲ್ಲಿ 3.8, ಹುಣಸಗಿ ತಾಲ್ಲೂಕಿನಲ್ಲಿ 1.7 ಎಂಎಂ ಮಳೆಯಾಗಿದೆ.
ಕೃಷಿ ಚಟುವಟಿಕೆ ಚುರುಕು:
ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿತ್ತನೆ ಕಾರ್ಯ ಸಾಗಿದೆ. ಬೀಜ, ರಸಗೊಬ್ಬರ ಖರೀದಿಯಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಮುಂಗಾರು ಆಶಾದಾಯಕವಾಗಿದ್ದು, ಜಿಲ್ಲೆಯಲ್ಲಿ 3.92 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.