ADVERTISEMENT

ಸಿಎಎ ಪರ ಬಿಜೆಪಿಯಿಂದ ಜನ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 10:39 IST
Last Updated 6 ಜನವರಿ 2020, 10:39 IST
ಶಹಾಪುರ ನಗರದ ಕುಂಬಾರಗೇರಿ ಮಠದಲ್ಲಿ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನಕ್ಕೆ ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಅಮಾತೆಪ್ಪ ಕಂದಕೂರ ಚಾಲನೆ ನೀಡಿದರು
ಶಹಾಪುರ ನಗರದ ಕುಂಬಾರಗೇರಿ ಮಠದಲ್ಲಿ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನಕ್ಕೆ ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಅಮಾತೆಪ್ಪ ಕಂದಕೂರ ಚಾಲನೆ ನೀಡಿದರು   

ಶಹಾಪುರ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಆದರೆ ವಿರೋಧ ಪಕ್ಷಗಳು ಅನವಶ್ಯಕವಾಗಿ ಗೊಂದಲ ಉಂಟು ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಮಾತೆಪ್ಪ ಕಂದಕೂರ ದೂರಿದರು.

ಇಲ್ಲಿನ ಕುಂಬಾರಗೇರಿ ಮಠದಲ್ಲಿ ಭಾನುವಾರ ಬಿಜೆಪಿ ಪಕ್ಷದ ನಗರ ಘಟಕ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಬಾಗಿಲಿಗೆ ತೆರಳಿ ಕಾಯ್ದೆ ಬಗ್ಗೆ ಮತದಾರರಿಗೆ ಮನದಟ್ಟು ಮಾಡಿಕೊಡಬೇಕು. ಯುವಕರು ಸಹ ಕಾಯ್ದೆಯ ಮಹತ್ವದ ಬಗ್ಗೆ ಅರಿತುಕೊಂಡು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದರು.

ADVERTISEMENT

ನಗರ ಘಟಕದ ಅಧ್ಯಕ್ಷ ದೇವಿಂದ್ರ ಕೊನೇರ, ಮಲ್ಲಿಕಾರ್ಜುನ ಚಿಲ್ಲಾಳ, ಅಡಿವೆಪ್ಪ ಜಾಕಾ, ಚಂದ್ರಶೇಖರ ಯಾಳಗಿ, ಲಾಲ್ ಅಹ್ಮದ ಖುರೇಶಿ, ಅಪ್ಪಣ್ಣ ದಶವಂತ, ಎಂ.ಡಿ.ಅಲಿ,ರಾಘವೇಂದ್ರ ಯಕ್ಷಿಂತಿ, ಮಂಜುನಾಥ ಗಣಾಚಾರಿ, ಶಾಂತಪ್ಪ ಕಟ್ಟಿಮನಿ, ಬಸವರಾಜ ಆನೆಗುಂದಿ ಇದ್ದರು.

ಗ್ರಾಮೀಣ ಘಟಕ: ಬಿಜೆಪಿಯ ಗ್ರಾಮೀಣ ಘಟಕವು ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ಭಾನುವಾರ ಸಿಎಎ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿಯ ಹಿರಿಯ ಮುಖಂಡ ಡಾ.ಚಂದ್ರಶೇಖರ ಸುಬೇದಾರ ಮಾತನಾಡಿ, ಪೌರತ್ವವನ್ನು ಮುಸ್ಲಿಂರಿಂದ ಕಸಿದುಕೊಳ್ಳಲಾಗುತ್ತದೆ. ಎನ್ಆರ್‌ಸಿ ಜಾರಿಯಿಂದ ದೇಶದ ಮುಸ್ಲಿಂರನ್ನು ದೇಶದಿಂದ ಹೊರ ಹಾಕಲಾಗುತ್ತದೆ ಎಂಬ ಸುಳ್ಳು ವದಂತಿಯನ್ನು ಹಬ್ಬಿಸಿ ಗ್ರಾಮೀಣ ಪ್ರದೇಶದಲ್ಲಿ ಶಾಂತಿಯನ್ನು ಕದಡುವುದು ಸರಿಯಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್‌ಸಿ ಜಾರಿಯಿಂದ ನಮ್ಮ ದೇಶದ ಪ್ರತಿ ಪ್ರಜೆಗೂ ಯಾವುದೇ ತೊಂದರೆ ಇಲ್ಲ. ಅಪಪ್ರಚಾರಗಳಿಗೆ ಯಾರೂ ಕಿವಿಕೊಡಬಾರದು ಎಂದು ತಿಳಿಸಿದರು.

ಬಿಜೆಪಿ ಮುಖಂಡ ಯಲ್ಲಯ್ಯ ನಾಯಕ ವನದುರ್ಗ, ರಾಜುಗೌಡ ಉಕ್ಕನಾಳ, ಮಹಾದೇವ ಆವಂಟಿ, ಸಂಗಪ್ಪ ಬಡಗಾ, ಚೆನ್ನಾರಡ್ಡಿ, ಬಸು ಪಾಟೀಲ, ಗೌಡಪ್ಪಗೌಡ ರಬ್ಬನಹಳ್ಳಿ, ಬಸವರಾಜ ಹೇರುಂಡಿ, ದೇವರಡ್ಡಿ ಕರಕಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.