ADVERTISEMENT

ಕೋವಿಡ್‌ಗೆ ಲಸಿಕೆ ರಾಮಬಾಣ: ಮುರುಘರಾಜೇಂದ್ರ ಸ್ವಾಮೀಜಿ ಅಭಿ‍ಪ್ರಾಯ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 4:31 IST
Last Updated 3 ಸೆಪ್ಟೆಂಬರ್ 2021, 4:31 IST
ಗುರುಮಠಕಲ್ ಪಟ್ಟಣದ ಖಾಸಾಮಠದಲ್ಲಿ ಗುರುವಾರ ಕೋವಿಡ್ ಲಸಿಕೆ ಪಡೆದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ
ಗುರುಮಠಕಲ್ ಪಟ್ಟಣದ ಖಾಸಾಮಠದಲ್ಲಿ ಗುರುವಾರ ಕೋವಿಡ್ ಲಸಿಕೆ ಪಡೆದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ   

ಗುರುಮಠಕಲ್: ‘ಕೋವಿಡ್ ಜಗತ್ತಿನಾದ್ಯಂತ ಆವ ರಿಸಿ ಜನ ರನ್ನು ಸಂಕಷ್ಟಕ್ಕೆ ದೂಡಿದೆ. ಸೋಂಕು ಜಯಿಸಲು ಲಸಿಕೆ ರಾಮಬಾಣವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳ ಬೇಕು’ ಎಂದು ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಖಾಸಾಮಠದಲ್ಲಿ ಗುರುವಾರ ಲಸಿಕೆ ಪಡೆದ ಮಾತನಾಡಿದ ಅವರು, ‘ನಾನು ಎರಡು ಡೋಸ್‌ ಲಸಿಕೆ ಪಡೆದಿದ್ದೇನೆ. ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಅದರ ಬಗೆಗಿನ ತಪ್ಪು ಮಾಹಿತಿಗೆ ಯಾರೂ ಕಿವಿಗೊಡಬಾರದು ಎಂದರು.

ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ಲಸಿಕೆಗಳು ಹೆಚ್ಚು ಪರಿಣಾಮಕಾರಿ ಎಂಬುವುದು ದೃಢವಾಗಿದೆ. ಈಗ ಉಚಿತ ಲಸಿಕೆ ಹಾಕಲಾಗುತ್ತಿದೆ, ಇದು ಎಲ್ಲರಿಗೂ ಅನುಕೂಲವಾಗಿದೆ. ಗ್ರಾಮೀಣ ಪ್ರದೇಶಗಳ ಜನರು ಲಸಿಕೆ ಪಡೆಯಲು ಮುಂದೆ ಬರಬೇಕು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.