ADVERTISEMENT

ಬಾಲಕಿ ಅಪಹರಿಸಿ ಅತ್ಯಾಚಾರ

ಒಂದು ವರ್ಷದ ಬಳಿಕ ಕೃತ್ಯ ಬೆಳಕಿಗೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 4:06 IST
Last Updated 26 ಸೆಪ್ಟೆಂಬರ್ 2021, 4:06 IST

ಶಹಾಪುರ: ತಾಲ್ಲೂಕಿನಲ್ಲಿ ಗ್ರಾಮ ವೊಂದರ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಲಾಗಿದೆ ಎಂದು ವರ್ಷದ ನಂತರ ಪ್ರಕರಣ ದಾಖಲಾಗಿದೆ.

‘ತಾಲ್ಲೂಕಿನ ಗ್ರಾಮವೊಂದರ ಸುನಿಲ ರಂಗಪ್ಪ ಮಲ್ಹಾರ (22) ಆರೋಪಿ. ಶಹಾಪುರದ ಶರಣಬಸವ ಮತ್ತು ಇನ್ನೊಂದು ಗ್ರಾಮದ ದೌಲಪ್ಪ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ. ಮೂವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

‘ಶುಕ್ರವಾರ ದೂರವಾಣಿ ಕರೆ ಬಂದಿದ್ದು, ಬಾಲಕಿ ಮೇಲೆ ಅತ್ಯಾಚಾರವಾಗಿದೆ. ಮುಂದಿನ ಕ್ರಮ ತೆಗೆದುಕೊಳ್ಳುವಂತೆ ಕೋರಲಾಗಿತ್ತು. ಶಹಾಪುರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಯ್ಯ ಹಿರೇಮಠ ಅವರು ಬಾಲಕಿಯನ್ನು ಭೇಟಿಯಾಗಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದರು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಮೂವರು ಆರೋಪಿಗಳು 2020ರ ಜುಲೈನಲ್ಲಿ ಬಾಲಕಿಯನ್ನು ಆಟೊದಲ್ಲಿ ಅಪಹರಿಸಿದ್ದರು. ನಿರ್ಜನ ಪ್ರದೇಶದಲ್ಲಿ ಸುನಿಲ ಕೃತ್ಯವಸೆಗಿದರೆ, ಇನ್ನಿಬ್ಬರು ಆರೋಪಿಗಳು ಕುಮ್ಮಕ್ಕು ನೀಡಿದ್ದರು. ಸ್ಥಳಕ್ಕೆ ಶನಿವಾರ ಆರೋಪಿಗಳನ್ನು ಕರೆದೊಯ್ದು ಮಹಜರು ಮಾಡಲಾಯಿತು’ ಎಂದು ಅವರು ತಿಳಿಸಿದ್ದಾರೆ.

ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.