ಯಾದಗಿರಿ: ಮದುವೆ ಆಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಹಣಮಂತ ಸಾಯಿಬಣ್ಣಗೆ ಪೊಲೀಸರು ಬಂಧಿಸಿದ್ದಾರೆ.
‘ವಡಗೇರಾ ತಾಲ್ಲೂಕಿನ ಗುರುಸಣಗಿ ಗ್ರಾಮದ ಆರೋಪಿ ಹಣಮಂತ, ಸಂತ್ರಸ್ತೆ ಯುವತಿಯ ತಾಯಿಯ ತಮ್ಮ.ಮದುವೆ ಆಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚ್ಯಾರ ಎಸಗಿದ್ದ. ಬಳಿಕ ಬೇರೆ ಯುವತಿಯ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಯುವತಿಯ ಗಮನಕ್ಕೆ ಬಂದು ಈ ಬಗ್ಗೆ ಪ್ರಶ್ನಿಸಿದಾಗ, ಮದುವೆ ಆಗಲು ನಿರಾಕರಿಸಿದ. ಇದರಿಂದ ಆತಂಕಗೊಂಡ ಯುವತಿಯು ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಆರೋಪಿಯನ್ನು ಬಂಧಿಸಿ, ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಮಹಿಳಾ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.