ಕೆಂಭಾವಿ: ಹಾಡುಹಗಲೇ ಮನೆ ಯೊಂದರ ಬೀಗ ಮುರಿದುಕಳ್ಳತನ ಮಾಡಿರುವ ಘಟನೆ ಶನಿವಾರ ಸಮೀಪದ ಯಾಳಗಿಗ್ರಾಮದಲ್ಲಿ ನಡೆದಿದೆ.
ಗೌಡಪ್ಪಗೌಡ ಬೊಮ್ಮರೆಡ್ಡಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಪೆಟ್ಟಿಗೆಯಲ್ಲಿ ಇಟ್ಟಿದ್ದ ಸುಮಾರು 120 ಗ್ರಾಂ (12 ತೊಲೆ) ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ.
ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ದಿನ ನಿತ್ಯದಂತೆ ಹೊಲದಲ್ಲಿ ಕೆಲಸಕ್ಕೆಂದು ತೆರಳಿದಾಗ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿದರು. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಭಾವಿ ಠಾಣೆಯ ಪೊಲೀಸರುತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ಇದೇ ಏರಿಯಾದಲ್ಲಿ ಎರಡು ಮನೆಗಳಲ್ಲಿ ಕಳ್ಳತನವಾಗಿದ್ದವು. ಆದರೆ ಮನೆ ಮಾಲಿಕರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪಿಎಸ್ಐ (ಅಪರಾಧ ವಿಭಾಗ) ವೆಂಕಣ್ಣ ಶಹಾಪುರಕರ್,ಸಿಬ್ಬಂದಿ ಬೀರಪ್ಪ, ಸುಭಾಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.