ADVERTISEMENT

ಹುಣಸಗಿ: ಸಂಗಪ್ಪ ಮಂಟೆಗೆ ಬೆಳಗಾವಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 16:02 IST
Last Updated 25 ಡಿಸೆಂಬರ್ 2024, 16:02 IST
ಸಂಗಪ್ಪ ಮಂಟೆ
ಸಂಗಪ್ಪ ಮಂಟೆ   

ಹುಣಸಗಿ: ಬೆಳಗಾವಿಯ ಸುವರ್ಣ ವಿಧಾನಸೌಧ ಆವರಣದಲ್ಲಿ ಡಿ. 27ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುತ್ಥಳಿ ಅನಾವಣ ಸಮಾರಂಭಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ ಅವರಿಗೆ ಅಧಿಕೃತ ಆಹ್ವಾನ ಬಂದಿದೆ.

ಈ ಕುರಿತು ಸರ್ಕಾರದಿಂದ ಪತ್ರ ಬಂದಿದ್ದು, ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪತ್ರ ಬರೆಯಲಾಗಿದೆ.

ಕುಲಕಸುಬು ನೇಕಾರಿಕೆ ವೃತ್ತಿಯ ಜೊತೆಗೆ ಹೈದರಾಬಾದ್‌ ಕರ್ನಾಟಕ ಹೋರಾಟದಲ್ಲಿ ಪಾಲ್ಗೊಂಡಿದ್ದ ಹೋರಾಟಗಾರರಲ್ಲಿ ಸಂಗಪ್ಪ ಮಂಟೆ ಒಬ್ಬರಾಗಿದ್ದರು.

ADVERTISEMENT

‘ಈ ಪತ್ರ ಬಂದಿದ್ದು, ಅತ್ಯಂತ ಖುಷಿ ತಂದಿದೆ. ಆರೋಗ್ಯ ಚೆನ್ನಾಗಿ ಇದ್ದರೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಪತ್ರಿಕೆಯೊಂದಿಗೆ ಮಾತನಾಡುತ್ತಾ ಮಂಟೆ ಖುಷಿ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.