ADVERTISEMENT

ಶಹಾಪುರ: ರಸ್ತೆ ದುರಸ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಧರಣಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 5:52 IST
Last Updated 2 ಸೆಪ್ಟೆಂಬರ್ 2022, 5:52 IST
ಶಹಾಪುರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ನಂದಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು
ಶಹಾಪುರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ನಂದಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು   

ಶಹಾಪುರ: ತಾಲ್ಲೂಕಿನ ಹತ್ತಿಗೂಡೂರ-ನಂದಿಹಳ್ಳಿ ಗ್ರಾಮದ ನಡುವಿನ 8.ಕಿ.ಮೀ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಗುರುವಾರ ನಂದಿಹಳ್ಳಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಪಂಚಾಯಿತಿ ಕಚೇರಿಯ ಮುಂದೆ ಧರಣಿ ನಡೆಸಿದರು.

ರಸ್ತೆ ಹಾಳಾಗಿದ್ದರಿಂದ ನಾವು ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮ್ಮ ಶಿಕ್ಷಣ ಕುಂಠಿತವಾಗುತ್ತದೆ ಎಂಬ ಭೀತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಚಂದ್ರಶೇಖರ ಮಾಗನೂರ ಧರಣಿ ಸ್ಥಳಕ್ಕೆ ಆಗಮಿಸಿ, ಈಗಾಗಲೇ ನಾನು ಕೂಡಾ ವೈಯಕ್ತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಾಲ್ಕು ತಿಂಗಳ ಹಿಂದೆ ಪತ್ರ ಬರೆದು ಮನವಿ ಮಾಡಿದ್ದರು ಸಹ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಬೇಸರ
ವ್ಯಕ್ತಪಡಿಸಿದರು.

ADVERTISEMENT

ನಂತರ ಜಿಲ್ಲಾ ಪಂಚಾಯಿತಿ ಎಂಜಿನಿಯರ್ ವಿದ್ಯಾರ್ಥಿಗಳಿಗೆ ಸಮಜಾಯಿಸಿ ನೀಡಿ ಇನ್ನೆರಡು ದಿನದಲ್ಲಿ ಕೆಲಸ ಆರಂಭಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಧರಣಿ ಹಿಂಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.