ADVERTISEMENT

ಶಹಾಪುರ: ಜಿಲ್ಲಾ ಮಟ್ಟದ ಕವಿಗೋಷ್ಠಿ, ಪ್ರಬಂಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2023, 6:32 IST
Last Updated 2 ಏಪ್ರಿಲ್ 2023, 6:32 IST
ಡಾ.ರವೀಂದ್ರನಾಥ ಹೊಸಮನಿ
ಡಾ.ರವೀಂದ್ರನಾಥ ಹೊಸಮನಿ   

ಶಹಾಪುರ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್‌ ಜಯಂತ್ಯುತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಕವಿಗೋಷ್ಠಿ ಮತ್ತು ‘ಪ್ರಬುದ್ಧ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್‌’ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಡಾ. ಬಿ.ಆರ್. ಅಂಬೇಡ್ಕರ್‌ ಅವರ ಬದಕು ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಕವಿತೆಗಳಾಗಿರಬೇಕು. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು ಒಂದು ಸಾವಿರ ಪದಗಳಿಗೆ ಮೀರದಂತೆ ಡಿ.ಟಿ.ಪಿ ಮಾಡಿಸಿ ಮತ್ತು ಕವಿಗಳು ತಮ್ಮ ಕವಿತೆಗಳನ್ನು ಸಹ ಡಿ.ಟಿ.ಪಿ. ಮಾಡಿಸಿ ಇ-ಮೇಲ್‌ಗೆ ಏ.10ರೊಳಗೆ ಕಳಹಿಸಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳಾದ ರಾಘವೇಂದ್ರ ಹಾರಣಗೇರಾ 9901559873, ಸುರೇಶಬಾಬು ಅರುಣಿ 9740722431 ಹಾಗೂ ಕೋಶಾಧ್ಯಕ್ಷ ಶಂಕರ ಹುಲ್ಕಲ್ 9743735650 ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.