ADVERTISEMENT

ಸುರಪುರ: ವಿದ್ಯುತ್ ತಗುಲಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 19 ಮೇ 2022, 2:29 IST
Last Updated 19 ಮೇ 2022, 2:29 IST

ಸುರಪುರ: ತಿಮ್ಮಾಪುರದ ಅಂಗಡಿಯೊಂದರ ಶಟರ್‌ಗೆ ಬೆನ್ನು ಹಚ್ಚಿ ಕುಳಿತ ವ್ಯಕ್ತಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಜರುಗಿದೆ. ರಮೇಶ ಕಡಿಗುಡ್ಡ (40) ಮೃತಪಟ್ಟವರು.

ಶಟರ್‌ನಲ್ಲಿ ವಿದ್ಯುತ್ ಪ್ರವಹಿಸಿದ್ದಕ್ಕೆ ಘಟನೆ ಸಂಭವಿಸಿದೆ ಎಂದು ಮೃತನ ಪತ್ನಿ ಯಲ್ಲಮ್ಮ ನೀಡಿದ ದೂರಿನಲ್ಲಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT