ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಗೋಡಿಹಾಳ ಗ್ರಾಮದಲ್ಲಿ ಶನಿವಾರ ಹಾವು ಐದಕ್ಕೂ ಹೆಚ್ಚು ಬಾರಿ ಕಚ್ಚಿದ್ದರಿಂದ ಗ್ರಾಮಸ್ಥ ಬಸವರಾಜ ಪೂಜಾರಿ (65) ಮೃತಪಟ್ಟಿದ್ದಾರೆ. ಹಾವನ್ನು ಕೈಯಲ್ಲಿ ಹಿಡಿದು ದೂರಕ್ಕೆ ಬಿಡಲು ಹೋಗುತ್ತಿದ್ದ ವೇಳೆ ಸತತ ಕಚ್ಚಿದರೂ ಬಿಡದ ಅವರು ಅದನ್ನು ಹಿಡಿದುಕೊಂಡೇ ಸಾವನ್ನಪ್ಪಿದ್ದಾರೆ.
‘ಬಸವರಾಜ ಪೂಜಾರಿ ಅವರು 300ಕ್ಕೂ ಹೆಚ್ಚು ಹಾವುಗಳನ್ನು ಹೀಗೆ ರಕ್ಷಿಸಿದ್ದರು. ಶನಿವಾರವೂ ಹಾವು ಹಿಡಿದಿದ್ದಾರೆ. ಅವರ ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಾವು ಪದೇ ಪದೇ ಕಚ್ಚಿದೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.