ಯಾದಗಿರಿ: ಜಿಲ್ಲೆಯ ಸೈದಾಪುರ ಸಮೀಪದ ಪುಟ್ಟ ಹಳ್ಳಿ ಕಡೇಚೂರು ಗ್ರಾಮಕ್ಕೆ ಬಸ್ಗಳೇ ಇಲ್ಲ. ಶಾಲಾ– ಕಾಲೇಜು ವಿದ್ಯಾರ್ಥಿಗಳು ಪ್ರತಿ ದಿನ ಬೆಳಿಗ್ಗೆ 3 ಕಿ.ಮೀ ಹಾಗೂ ಸಂಜೆ 3 ಕಿ.ಮೀ ನಡೆಯಲೇಬೇಕು. ಪ್ರೌಢಶಾಲೆ, ಕಾಲೇಜು ಶಿಕ್ಷಣ ಪಡೆಯಬೇಕೆಂದರೆ ಪ್ರತಿದಿನ ಪಾದಯಾತ್ರೆ ಅನಿವಾರ್ಯ. ಇದು ಒಬ್ಬಿಬ್ಬರ ಸಮಸ್ಯೆಯಲ್ಲ; ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಲವು ವರ್ಷಗಳಿಂದ ಈ ಸಂಕಷ್ಟ ಎದುರಿಸುತ್ತಲೇ ಇದ್ದಾರೆ. ಅಧಿಕಾರಿಗಳೇ ಈಗಲಾದರೂ ಕಣ್ಣು ತೆರೆಯಬಹುದಲ್ಲವೇ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.