ಯಾದಗಿರಿ: ಜಿಲ್ಲೆಯ ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಅವರ ಕಾರು ಶಹಾಪುರ-ಸುರಪುರ ರಾಜ್ಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಸಣ್ಣ ಪುಟ್ಟ ಗಾಯಗಳಾಗಿವೆ.
ಘಟನೆ ವಿವರ:ಸೋಮವಾರ ಬೆಳಗಿನ ಜಾವ ಸುಮಾರು 4.30 ಕ್ಕೆ ಡಿವೈಎಸ್ಪಿ ಕರ್ತವ್ಯದಲ್ಲಿ ವೇಳೆ ಶಹಾಪುರ ಸುಬೇದಾರ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ಕಾರಿನ ಮುಂಭಾಗ ಜಖಂ ಆಗಿದೆ. ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಹೆಡ್ ಕಾನ್ ಸ್ಟೆಬಲ್ ಉಮಾಕಾಂತ, ವಾಹನ ಚಾಲಕ ಚನ್ನಪ್ಪಗೌಡ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಡಿವೈಎಸ್ಪಿಯವರು ಸುಬೇದಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.