
ಪ್ರಜಾವಾಣಿ ವಾರ್ತೆ
ಸುರಪುರ: ಇಲ್ಲಿಯ ತಹಶೀಲ್ದಾರ್ ಕಚೇರಿ ರಸ್ತೆಯ ನಡಗೇರಿ ಓಣಿಯ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗುರುವಾರ ಸಹಸ್ರ ದೀಪೋತ್ಸವ ಸಡಗರ ಸಂಭ್ರಮದೊಂದಿಗೆ ನೆರವೇರಿತು.
ದೇವಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಮಹಾಲಕ್ಷ್ಮೀ ದೇವಿಯ ದರ್ಶನ ಭಾಗ್ಯ ಪಡೆದು ನಂತರ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.
ಹಣತೆಯಲ್ಲಿ ಭಕ್ತರು ಹಚ್ಚಿದ ದೀಪದಿಂದ ದೇವಸ್ಥಾನ ಬೆಳಕಿನಿಂದ ಝಗಮಗಿಸಿ ಕಂಗೊಳಿಸಿತು. ಭಕ್ತರು ಉತ್ಸಾಹದಿಂದ ದೀಪೋತ್ಸವದಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.